ADVERTISEMENT

‘ಸಿದ್ಧಗಂಗಾಶ್ರೀ ನಿಲುವಿಗೆ ಬೆಂಬಲ’

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2018, 19:30 IST
Last Updated 8 ಮಾರ್ಚ್ 2018, 19:30 IST

ನವದೆಹಲಿ: ‘ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಲು ರಾಜ್ಯ ಸರ್ಕಾರ ತಜ್ಞರ ಸಮಿತಿಯ ವರದಿ ಆಧರಿಸಿ ಕೇಂದ್ರಕ್ಕೆ ಶಿಫಾರಸು ಮಾಡಿದರೂ, ನಾವು ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ನಿಲುವಿಗೆ ಬೆಂಬಲ ನೀಡುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ವೀರಶೈವ– ಲಿಂಗಾಯತ ಎಂಬ ಹೆಸರಿನಡಿಯೇ ಪ್ರತ್ಯೇಕ ಧರ್ಮದ ಸ್ಥಾನಮಾನ ದೊರೆ
ಯಲಿ’ ಎಂಬ ಶಾಮನೂರು ಶಿವಶಂಕರಪ್ಪ ಅವರ ನಿಲುವನ್ನೇ ಲಿಂಗಾಯತರು ಬೆಂಬಲಿಸಿದ್ದಾರೆ ಎಂದರು.

‘ನಾನು ಇತ್ತೀಚೆಗೆ ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. ಅಲ್ಲಿನ ಲಿಂಗಾಯತರೆಲ್ಲರೂ ವೀರಶೈವ ಎಂಬ ಪದ ಬೇಡ ಎಂದು ತಿಳಿಸಿಲ್ಲ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.