ಮಂಗಳೂರು: ಇಲ್ಲಿನ ಯೆಯ್ಯಾಡಿ ಜಂಕ್ಷನ್ನಲ್ಲಿ ಶನಿವಾರ ನಡೆಯುತ್ತಿದ್ದ ಸಿಪಿಎಂ ಚುನಾವಣಾ ಪ್ರಚಾರ ಸಭೆಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಪಡಿಸಲು ಯತ್ನಿಸಿದ್ದಾರೆ.
ಸಂಜೆ 6.30ರ ಸುಮಾರಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಸುನಿಲ್ ಕುಮಾರ್ ಬಜಾಲ್ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಸಿಪಿಎಂ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದು ಸಭೆ ನಡೆಸುತ್ತಿತ್ತು. ಅಲ್ಲಿಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು ಸಭೆ ನಡೆಸದಂತೆ ಆಗ್ರಹಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ‘ಮೋದಿ, ಮೋದಿ..‘ ಎಂದು ಕೂಗಲಾರಂಭಿಸಿದರು. ಸಿಪಿಎಂ ಕಾರ್ಯಕರ್ತರು ‘ಇಂಕ್ವಿಲಾಬ್ ಜಿಂದಾಬಾದ್...’ ಎಂದು ಪ್ರತಿ ಘೋಷಣೆ ಹಾಕಿದರು. ನಂತರ ಎರಡೂ ಗುಂಪಿನ ನಡುವೆ ಹೊಯ್ ಕೈ ನಡೆದಿದೆ.
</p><p>ಸ್ಥಳಕ್ಕೆ ಹೆಚ್ಚುವರಿ ಪೊಲೀಸರು ಬಂದು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಸಂಬಂಧ ನಾಲ್ವರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p></p>
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.