ADVERTISEMENT

ಸಿಬ್ಬಂದಿಯ ಮೂಲ ವೇತನ ಹೆಚ್ಚಿಸಿ

ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಫೆಡರೇಷನ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2017, 19:30 IST
Last Updated 16 ಅಕ್ಟೋಬರ್ 2017, 19:30 IST

ಬೆಂಗಳೂರು: ‘ಕೈಗಾರಿಕಾ ವಿವಾದ ಔದ್ಯಮಿಕ ನ್ಯಾಯಾಧೀಕರಣವು 2017ರ ಆಗಸ್ಟ್‌ 29ರಂದು ನೀಡಿದ ತೀರ್ಪನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಆರ್‌ಟಿಸಿ) ಕೂಡಲೇ ಜಾರಿಗೊಳಿಸಬೇಕು’ ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಫೆಡರೇಷನ್‌ನ ಜಂಟಿ ಕಾರ್ಯದರ್ಶಿ ಎಸ್‌.ನಾಗರಾಜು ಒತ್ತಾಯಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿಗಮದ ಕಾರ್ಮಿಕರ ಮೂಲ ವೇತನವನ್ನು ಶೇ 20ರಷ್ಟು ಹೆಚ್ಚಿಸಬೇಕು. ಹಬ್ಬದ ಮುಂಗಡವಾಗಿ ಪ್ರತಿವರ್ಷ ₹ 5,000 ನೀಡಬೇಕು. ನೌಕರರಿಗೆ ಸಮವಸ್ತ್ರ ಹೊಲಿಸಿಕೊಳ್ಳಲು ವಾರ್ಷಿಕ ₹ 250 ನೀಡಬೇಕು. ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗಕ್ಕೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಸಮಗ್ರ ಯೋಜನೆ ರೂಪಿಸಬೇಕು’ ಎಂದರು.

‘ಸರ್ಕಾರಿ ನೌಕರರಿಗೆ ಇರುವ ಎಲ್ಲ ಪಿಂಚಣಿ ಸೌಲಭ್ಯಗಳನ್ನು ನಿಗಮದ ಕಾರ್ಮಿಕರಿಗೂ ಒದಗಿಸಬೇಕು. ಪ್ರತಿ ಬಸ್‌ ಡಿಪೊದಲ್ಲಿ ಕ್ಯಾಂಟೀನ್‌ ಆರಂಭಿಸಬೇಕು. ಅಪಘಾತ ಪರಿಹಾರ, ವಿದ್ಯಾನಿಧಿ, ಚಾಲಕರ ರಕ್ಷಣೆಗೆ ಸಹಾಯಧನ ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.