ADVERTISEMENT

‘ಸುಕ್ರಿ ಗೌಡ ಚಿಕಿತ್ಸೆ ವೆಚ್ಚ ಭರಿಸಲು ಕ್ರಮ’

​ಪ್ರಜಾವಾಣಿ ವಾರ್ತೆ
Published 5 ಜುಲೈ 2017, 19:30 IST
Last Updated 5 ಜುಲೈ 2017, 19:30 IST
‘ಸುಕ್ರಿ ಗೌಡ ಚಿಕಿತ್ಸೆ ವೆಚ್ಚ ಭರಿಸಲು ಕ್ರಮ’
‘ಸುಕ್ರಿ ಗೌಡ ಚಿಕಿತ್ಸೆ ವೆಚ್ಚ ಭರಿಸಲು ಕ್ರಮ’   

ಕಾರವಾರ: ‘ಜಾನಪದ ಕಲಾವಿದೆ ಅಂಕೋಲಾದ ಸುಕ್ರಿ ಬೊಮ್ಮು ಗೌಡ ಅವರು ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಭರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸುಕ್ರಿ ಅವರ ಕಲಾಸೇವೆ ನಾಡಿಗೆ ಇನ್ನೂ ಬಹುಕಾಲ ಅಗತ್ಯವಾಗಿದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕು. ಅವರ ಕಲಾಸಾಧನೆ ನಿರಂತರವಾಗಿ ಮುಂದುವರಿಯಬೇಕು’ ಎಂದು ಆಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT