ADVERTISEMENT

ಸುನಂದಾ ಕೊಲೆ ಪ್ರಕರಣ ಸಾಬೀತು

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 19:30 IST
Last Updated 18 ಡಿಸೆಂಬರ್ 2013, 19:30 IST

ಮಂಗಳೂರು: ಸೈನೈಡ್‌ ತಿನ್ನಿಸಿ ಮಹಿಳೆಯರನ್ನು ಕೊಲೆ ಮಾಡುತ್ತಿದ್ದ ಆರೋಪಿ, ಬಂಟ್ವಾಳ ತಾಲ್ಲೂಕಿನ ಕನ್ಯಾನದ ಶಿಕ್ಷಕ ಮೋಹನ ಕುಮಾರ್‌ ವಿರುದ್ಧ ಇನ್ನೊಂದು ಕೊಲೆ ಪ್ರಕರಣ ಸಾಬೀತಾಗಿದೆ. 

ಮೋಹನ ಸುಳ್ಯ ತಾಲ್ಲೂಕಿನ ಪೆರುವಾಜೆಯ ಸುನಂದಾ (28) ಅವರನ್ನು ಅಪಹರಿಸಿ ಕೊಲೆ ಮಾಡಿರುವುದು ಸಾಬೀತಾಗಿದೆ ಎಂದು ಇಲ್ಲಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಬಿ.ಕೆ.ನಾಯಿಕ ಅವರು ಬುಧವಾರ ಆದೇಶ ನೀಡಿದರು. ಮೋಹನನ ಮೇಲಿರುವ 20 ಕೊಲೆ ಪ್ರಕರಣಗಳ ಪೈಕಿ ಮೂರರಲ್ಲಿ ಆತನಿಗೆ ಶಿಕ್ಷೆ ಆಗುವುದು ಖಚಿತವಾದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.