ADVERTISEMENT

ಸುಪ್ರೀಂ ಕೋರ್ಟ್‌ ಆದೇಶವನ್ನು ನಾವು ಸ್ವಾಗತಿಸುತ್ತೇವೆ: ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 18 ಮೇ 2018, 7:45 IST
Last Updated 18 ಮೇ 2018, 7:45 IST
ಶೋಭಾ ಕರಂದ್ಲಾಜೆ, ಚಿತ್ರ: ಎಎನ್‌ಐ ಟ್ವಿಟರ್‌
ಶೋಭಾ ಕರಂದ್ಲಾಜೆ, ಚಿತ್ರ: ಎಎನ್‌ಐ ಟ್ವಿಟರ್‌   

ಬೆಂಗಳೂರು: ಸುಪ್ರೀಂ ಕೋರ್ಟ್‌ ನೀಡಿರುವ ವಿಶ್ವಾಸಮತ ಸಾಬೀತುಪಡಿಸುವ ಆದೇಶವನ್ನು ನಾವು(ಬಿಜೆಪಿಯವರು) ಸ್ವಾಗತಿಸುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.

‘ಪ್ರಮಾಣ ವಚನ ಸಮಾರಂಭಕ್ಕೆ ಅವಕಾಶ ನೀಡಕೂಡದು’ ಎಂದು ಕೋರಿ ಕಾಂಗ್ರೆಸ್‌–ಜೆಡಿಎಸ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಶುಕ್ರವಾರ ಬೆಳಿಗ್ಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌ ನಾಳೆ(ಶನಿವಾರ) ಸಂಜೆ 4ಕ್ಕೆ ಬಹುಮತ ಸಾಬೀತುಪಡಿಸುವಂತೆ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ಆದೇಶ ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ‘ಸುಪ್ರೀಂ ಕೋರ್ಟ್‌ನ ಆದೇಶವನ್ನು ನಾವು ಪಾಲಿಸುತ್ತೇವೆ. ನಾಳೆಯೇ ವಿಶ್ವಾಸ ಮತ ಸಾಬೀತುಪಡಿಸುತ್ತೇವೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.