ADVERTISEMENT

ಸೂರ್ಯೋದಯ ಎಷ್ಟು ಸತ್ಯವೋ, ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದೂ ಅಷ್ಟೇ ಸತ್ಯ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2018, 9:27 IST
Last Updated 29 ಏಪ್ರಿಲ್ 2018, 9:27 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬಾಗಲಕೋಟ: ‘ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದೂ ಅಷ್ಟೇ ಸತ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಮುಧೋಳದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಜೈಲಿಗೆ ಹೋದವ್ರು, ರೈತರ ಸಾಲ ಮನ್ನಾ ಮಾಡದ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಆಗಬೇಕಾ? ಎಂದು ಸಿಎಂ ಪ್ರಶ್ನಿಸಿದರು.

ADVERTISEMENT

ನರೇಂದ್ರ ಮೋದಿ ಇಲ್ಲಿಯವರೆಗೂ ರೈತರ ಸಾಲ ಮನ್ನಾ ಮಾಡಿಲ್ಲ, ಒಂದು ವೇಳೆ ಸಾಲ ಮನ್ನಾ ಮಾಡಿದರೆ ದೇಶದ ಅರ್ಥ ವ್ಯವಸ್ಥೆ ಹಾಳಾಗುತ್ತೆ ಎಂದು ಹೇಳುತ್ತಾರೆ. ಆದರೆ, ರಾಜ್ಯದಲ್ಲಿ ನಾವು ರೈತರ ₹ 8,165 ಕೋಟಿ ಸಾಲ ಮನ್ನಾ ಮಾಡಿದ್ದೇವೆ. ಬಿಜೆಪಿ ಬಣ್ಣದ ಮಾತುಗಳಿಗೆ, ಶಾಸಕ ಗೋವಿಂದ ಕಾರಜೋಳ ಬಣ್ಣದ ಮಾತುಗಳಿಗೆ ಮರಳಾಗಬೇಡಿ ಎಂದು ಜನರಲ್ಲಿ ಮನವಿ ಮಾಡಿದರು.

‘ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದೂ ಅಷ್ಟೇ ಸತ್ಯ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಪ್ರಧಾನಿ ಮೋದಿ ಒಬ್ಬ ಮಹಾನ್‌ ಸುಳ್ಳುಗಾರ’ ಎನ್ನುವ ಮೂಲಕ ತಮ್ಮ ಹಳೆಯ ಹೇಳಿಕೆಗಳನ್ನೇ ಭಾಷಣದುದ್ದಕ್ಕೂ ಪುನರುಚ್ಚರಿಸಿದರು.

ಇದನ್ನೂ ಓದಿ... 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.