ADVERTISEMENT

ಸೋಮಶೇಖರ್ ವರದಿ ತಿರಸ್ಕರಿಸಿದ್ದೇನೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2011, 17:35 IST
Last Updated 19 ಫೆಬ್ರುವರಿ 2011, 17:35 IST

ಬೆಂಗಳೂರು: ‘ರಾಜ್ಯದ ವಿವಿಧೆಡೆ ನಡೆದ ಚರ್ಚ್ ದಾಳಿಗೆ ಸಂಬಂಧಿಸಿದಂತೆ ನ್ಯಾ.ಬಿ.ಕೆ.ಸೋಮಶೇಖರ್ ಅವರು ನೀಡಿದ ತನಿಖಾ ವರದಿಯನ್ನು ಎಂದೋ ತಿರಸ್ಕರಿಸಿದ್ದೇನೆ’ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಕರ್ನಾಟಕ ಯಾವಾಗಲೂ ಧಾರ್ಮಿಕ ಸಹಿಷ್ಣುತೆಗೆ ಪ್ರಸಿದ್ಧಿಯಾಗಿದೆ.  ಈ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಚರ್ಚ್‌ಗಳ ಮೇಲೆ ನಡೆಸಿದ ದಾಳಿಯನ್ನು ಒಪ್ಪುವಂಥದಲ್ಲ. ಈ ಬಗ್ಗೆ ಮಾಧ್ಯಮಗಳು ತಮ್ಮ ಪಾತ್ರ ನಿರ್ವಹಿಸಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.