ADVERTISEMENT

ಸೋಹನಕುಮಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2011, 9:05 IST
Last Updated 20 ಸೆಪ್ಟೆಂಬರ್ 2011, 9:05 IST

ಬೆಂಗಳೂರು, (ಪಿಟಿಐ): ಕರ್ನಾಟಕ ಲೋಕಾಯುಕ್ತ ಪೊಲೀಸರು ಭೂಮಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಳಿಯ ಸೋಹನ್ ಕುಮಾರ್ ಅವರಿಗೆ ಸೇರಿದ್ದ  ಇಲ್ಲಿನ ನಾಲ್ಕು ಕಚೇರಿಗಳ ಮೇಲೆ ಮಂಗಳವಾರ ದಾಳಿ ನಡೆಸಿ ದಾಖಲೆಗಳಿಗಾಗಿ ಹುಡುಕಾಟ ನಡೆಸಿದರು.

ಲೋಕಾಯುಕ್ತ ಪೊಲೀಸರ ನಾಲ್ಕು ತಂಡಗಳು ಪ್ರತ್ಯೇಕವಾಗಿ ಪ್ರೇರಣಾ ಚೇಂಬರ್ಸ್, ಧವಳಗಿರಿ ಪ್ರಾಪರ್ಟಿಸ್ ನ ಎರಡು ಕಚೇರಿಗಳು ಮತ್ತು  ಸಹ್ಯಾದ್ರಿ ಹೆಲ್ತ್ ಕೇರ್ ಸಂಸ್ಥೆಗಳ ಕಚೇರಿಗಳ ಮೇಲೆ ದಾಳಿ ನಡೆಸಿದವು.

ಧವಳಗಿರಿ ಪ್ರಾಪರ್ಟಿಸ್ ಸಂಸ್ಥೆ  ಯಡಿಯೂರಪ್ಪ ಅವರ ಅಳಿಯ ಸೋಹನಕುಮಾರ ಮತ್ತು ಮಕ್ಕಳಾದ ಬಿ.ವೈ.ರಾಘವೇಂದ್ರ ಮತ್ತು ಬಿ.ವೈ.ವಿಜೇಂದ್ರ ಅವರಿಗೆ ಸೇರಿದೆ.

ADVERTISEMENT

ಅಳಿಯ ಮತ್ತು ಮಕ್ಕಳಿಗೆ ಅನುಕೂಲ ಕಲ್ಪಸುವ ಉದ್ದೇಶದಿಂದ ಕಾನೂನುಬಾಹಿರವಾಗಿ ಡಿನೋಟಿಪಿಕೇಷನ್ ಮಾಡಲಾಗಿದೆ ಹಾಗೂ ಅಕ್ರಮ ಎಸಗಲಾಗಿದೆ ಎಂಬ ಖಾಸಗಿ ದೂರಿನ ಪ್ರಕರಣದ ತನಿಖೆಯ ಅಂಗವಾಗಿ ಈ ದಾಳಿ ಮತ್ತು ದಾಖಲೆಗಳ ಪರಿಶೀಲನೆ ನಡೆದಿದೆ. 

ಕೊಪ್ಪಳದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ಕೈಗೊಂಡಿರುವ  ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಲೋಕಾಯುಕ್ತ ಪೊಲೀಸರ ದಾಳಿಯ ಕುರಿತು ತಮಗೆ ನಿನ್ನೆಯೇ ಮಾಹಿತಿ ಇತ್ತು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.