ADVERTISEMENT

ಸ್ಥಳದಲ್ಲೇ ಚಾಲನಾ ಆದೇಶ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2019, 18:35 IST
Last Updated 2 ಅಕ್ಟೋಬರ್ 2019, 18:35 IST

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಅಂತರ ಘಟಕ ವರ್ಗಾವಣಾ ಕೌನ್ಸೆಲಿಂಗ್‌ ನಡೆಯುತ್ತಿದ್ದು, ವರ್ಗಾವಣೆಗೊಂಡವರಿಗೆ ಸ್ಥಳದಲ್ಲೇ ಚಾಲನಾ ಆದೇಶ ನೀಡಲಾಗುತ್ತಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಲ್ಪನಿಕ ವೇತನ ಸಭೆ ಇಂದು

ಅನುದಾನಿತ ಶಾಲಾ, ಕಾಲೇಜುಗಳ ಬೋಧಕರಿಗೆ ಕಾಲ್ಪನಿಕ ವೇತನ ಮತ್ತು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಬಸವರಾಜ ಹೊರಟ್ಟಿ ಸಮಿತಿ ಮಾಡಿರುವ ಶಿಫಾರಸನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಗುರುವಾರ ಮಂಡ್ಯ ಜಿಲ್ಲೆಬೆಳ್ಖೂರು ಕ್ರಾಸ್‌ನ ಆದಿಚುಂಚನಗಿರಿ ಕ್ಷೇತ್ರದ ಶ್ರೀ ಗಂಗಾಧರೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ ಎಂದು
ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.