ADVERTISEMENT

ಸ್ವಾಭಿಮಾನದ ಸಂಕೇತ: ಮರುಳಸಿದ್ದಪ್ಪ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2011, 17:25 IST
Last Updated 21 ಫೆಬ್ರುವರಿ 2011, 17:25 IST

ಬೆಂಗಳೂರು: ‘ಸೋಲು-ಗೆಲುವಿನ ಲೆಕ್ಕಾಚಾರಕ್ಕಿಂತ ರಾಜ್ಯದ ಸ್ವಾಭಿಮಾನದ ಸಂಕೇತವಾಗಿ ನಾನು ನಾಮಪತ್ರ ಸಲ್ಲಿಸಿದ್ದೇನೆ’ ಎಂದು ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ಸೋಮವಾರ ಇಲ್ಲಿ ತಿಳಿಸಿದರು.

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ನಾನೊಬ್ಬ ಕನ್ನಡಿಗ. ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದ್ದು, ಸ್ವಾಭಿಮಾನಿ ಕನ್ನಡಿಗರು ಮತಚಲಾಯಿಸವ ವಿಶ್ವಾಸ ಇದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾಜರಿದ್ದ ಕಾಂಗ್ರೆಸ್‌ನ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಮತ್ತು ಜೆಡಿಎಸ್‌ನ ಎಚ್.ಡಿ.ರೇವಣ್ಣ  ಮಾತನಾಡಿ,   ‘ಹೊರಗಿನಿಂದ ಬಂದವರು ರಾಜ್ಯ     ಸಭೆಗೆ ಹೋಗಿ ರಾಜ್ಯಕ್ಕೆ ನ್ಯಾಯ ಒದಗಿಸಲು ಆಗುವುದಿಲ್ಲ. ಹೀಗಾಗಿ ನಾಡಿನ ಸಂಕೇತವಾದ ಹಿರಿಯ ಸಾಹಿತಿಗಳನ್ನು ಕಣಕ್ಕೆ ಇಳಿಸಿದ್ದು, ಗೆಲುವು ಖಚಿತ’ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.