ADVERTISEMENT

ಸ್ವಾಮೀಜಿ ರಾಸಲೀಲೆ? ಗ್ರಾಮಸ್ಥರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2017, 6:45 IST
Last Updated 26 ಅಕ್ಟೋಬರ್ 2017, 6:45 IST
ಸ್ವಾಮೀಜಿ ರಾಸಲೀಲೆ? ಗ್ರಾಮಸ್ಥರ ಪ್ರತಿಭಟನೆ
ಸ್ವಾಮೀಜಿ ರಾಸಲೀಲೆ? ಗ್ರಾಮಸ್ಥರ ಪ್ರತಿಭಟನೆ   

ಬೆಂಗಳೂರು: ಮಠದಲ್ಲೇ ರಾಸಲೀಲೆ ನಡೆಸಿರುವ ಆರೋಪ ಎದುರಿಸುತ್ತಿರುವ ಹುಣಸಮಾರನಹಳ್ಳಿಯ ಜಂಗಮಮಠದ ದಯಾನಂದ ಸ್ವಾಮೀಜಿ ಕೂಡಲೇ ಪೀಠತ್ಯಾಗ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ಭಕ್ತರು ಗುರುವಾರ ಮಠದ ಎದುರು ಪ್ರತಿಭಟನೆ ನಡೆಸಿದ್ದಾರೆ.

ಸ್ವಾಮೀಜಿ ಮಹಿಳೆಯೊಬ್ಬರ ಜತೆ ರಾಸಲೀಲೆಯಲ್ಲಿ ತೊಡಗಿದ್ದಾರೆ ಎನ್ನಲಾದ ದೃಶ್ಯಗಳು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿದ್ದವು. ಸುದ್ದಿ ತಿಳಿದು ಮಠದ ಎದುರು ಜಮಾಯಿಸಿದ ಗ್ರಾಮಸ್ಥರು ಹಾಗೂ ಭಕ್ತರು ಮಠದೊಳಕ್ಕೆ ನುಗ್ಗಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಇದರಿಂದ ಭಕ್ತರು ಮತ್ತು ಪೊಲೀಸರ ನಡುವೆ ವಾಗ್ದಾದ ನಡೆಯಿತು.

ಮಠಕ್ಕೆ ಸೇರಿದ ಆಸ್ತಿಯನ್ನು ಸ್ವಾಮೀಜಿ ಮಾರಿಕೊಂಡಿದ್ದಾರೆ ಎಂದೂ ಪ್ರತಿಭಟನಾನಿರತರು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.