ADVERTISEMENT

ಹಲ್ಲೆ ಆರೋಪ: ಪಾಲಿಕೆ ಸದಸ್ಯನ ಬಂಧನ

​ಪ್ರಜಾವಾಣಿ ವಾರ್ತೆ
Published 12 ಮೇ 2018, 19:30 IST
Last Updated 12 ಮೇ 2018, 19:30 IST

ದಾವಣಗೆರೆ: ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪಾಲಿಕೆ ಸದಸ್ಯ ಹಾಗೂ ಕಾಂಗ್ರೆಸ್‌ ಮುಖಂಡ ಜೆ.ಎನ್‌. ಶ್ರೀನಿವಾಸ್ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಹಲ್ಲೆ ಪ್ರಕರಣ ಸಂಬಂಧ ಸಂತೋಷ್, ಸದ್ದಾಂ, ವಿಶಾಖ್‌ ಎಂಬುವರ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ಘಟನೆ ವಿವರ: ಕೆಟಿಜೆ ನಗರದಲ್ಲಿರುವ ಮಂಜುಶ್ರೀ ಆನ್‌ಲೈನ್‌ ನೆಟ್‌ ಅಂಡ್‌ ಕಮ್ಯುನಿಕೇಷನ್‌ ಸೆಂಟರ್‌ನಲ್ಲಿ ಮತದಾರರಿಗೆ ಚೀಟಿ ನೀಡಲಾಗುತ್ತಿತ್ತು. ಈ ಸಂದರ್ಭ ಶ್ರೀನಿವಾಸ್ ಕರೆ ಮಾಡಿ ಚೀಟಿ ಕೊಡುವುದನ್ನು ನಿಲ್ಲಿಸುವಂತೆ ಬೆದರಿಕೆ ಹಾಕಿದರು. ಇದಕ್ಕೆ ಬಗ್ಗದ್ದಿದ್ದಾಗ ಅಂಗಡಿಗೆ ಬಂದು ಹಲ್ಲೆ ನಡೆಸಿದರು ಎಂದು ಪ್ರವೀಣ್ ಕೆಟಿಜೆ ನಗರ ಠಾಣೆಗೆ ದೂರು ನೀಡಿದ್ದಾರೆ.

ADVERTISEMENT

ಶ್ರೀನಿವಾಸ್ ಅವರನ್ನು ಬಂಧಿಸಿದ್ದು, ಉಳಿದವರನ್ನೂ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್.ಚೇತನ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.