ADVERTISEMENT

ಹವಾಮಾನ ವರದಿ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2011, 19:30 IST
Last Updated 11 ಅಕ್ಟೋಬರ್ 2011, 19:30 IST

ಕರಾವಳಿ, ಒಳನಾಡಿನ ಹಲವೆಡೆ ಮಳೆ
ಬೆಂಗಳೂರು:
ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿದೆ. ದೇವನಹಳ್ಳಿ, ಬಾಗೇಪಲ್ಲಿ 7 ಸೆಂ.ಮೀ, ಸುಬ್ರಹ್ಮಣ್ಯ 6,

ಎನ್.ಆರ್.ಪುರ, ಬೇಗೂರು, ನೆಲಮಂಗಲ 5, ಬೆಳ್ತಂಗಡಿ, ಗೋಕರ್ಣ, ಅಥಣಿ, ಭಾಗಮಂಡಲ, ನಾಪೋಕ್ಲು, ಬಂಗಾರಪೇಟೆ, ಸಂಡೂರು, ಹೊಸಹಳ್ಳಿ, ತೊಂಡೇಬಾವಿ, ಗುಡಿಬಂಡೆ 4ಸೆಂ.ಮೀ ಮಳೆಯಾಗಿದೆ.
ರಾಯಚೂರು ಮತ್ತು ಗುಲ್ಬರ್ಗದಲ್ಲಿ  35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ ಮಂಡ್ಯದಲ್ಲಿ 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ವರೆಗೆ ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.