ADVERTISEMENT

ಹವಾಮಾನ ವರದಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2012, 19:30 IST
Last Updated 7 ಜುಲೈ 2012, 19:30 IST

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ
ಬೆಂಗಳೂರು:
ಶನಿವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಕದ್ರಾ 5 ಸೆಂ.ಮೀ., ಸಿದ್ದಾಪುರ, ಆಳಂದ 4 ಸೆಂ.ಮೀ., ಮಂಗಳೂರು, ಮುಲ್ಕಿ, ಮೂಡಬಿದರೆ, ಕೊಲ್ಲೂರು, ಕುಂದಾಪುರ, ಶಿರಾಲಿ, ಅಂಕೋಲಾ 3, ಬಂಟ್ವಾಳ, ಮಾಣಿ, ಪುತ್ತೂರು, ಉಡುಪಿ, ಗೋಕರ್ಣ, ಕುಮಟಾ, ಯಲ್ಲಾಪುರ, ಸುಳ್ಯ, ಬೀದರ್, ಸಂಕೇಶ್ವರ, ಖಾನಾಪುರ, ಭಾಗಮಂಡಲ, ಆಗುಂಬೆ 2, ಬೆಳ್ತಂಗಡಿ, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಭಟ್ಕಳ, ಹಳಿಯಾಳ, ಕಾರವಾರ, ಬೆಳಗಾವಿ ವಿಮಾನ ನಿಲ್ದಾಣ, ಹುಕ್ಕೇರಿ, ನಿಪ್ಪಾಣಿ, ಬಸವಕಲ್ಯಾಣ, ಶೃಂಗೇರಿ, ಕೊಟ್ಟಿಗೆಹಾರ, ಕಳಸ, ಗುಲ್ಬರ್ಗ, ಮಡಿಕೇರಿಯಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.