ADVERTISEMENT

ಹಾಸನ, ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2012, 19:30 IST
Last Updated 16 ಆಗಸ್ಟ್ 2012, 19:30 IST

ಅರಕಲಗೂಡು/ಸೋಮವಾರಪೇಟೆ: ಹಾಸನ ಜಿಲ್ಲೆ ಅರಕಲಗೂಡು ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳು ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ, ಕೊಡ್ಲಿಪೇಟೆ ಹೋಬಳಿಗಳಲ್ಲಿ ಗುರುವಾರ ಮುಂಜಾನೆ 6.20 ರಲ್ಲಿ ಲಘು ಭೂಕಂಪನದ ಅನುಭವವಾಗಿದೆ. ಇದರಿಂದ ಈ ಭಾಗದ ಜನತೆ ಕೆಲಹೊತ್ತು ಭಯಭೀತರಾಗಿದ್ದರು.

 ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.6 ರಷ್ಟು ದಾಖಲಾಗಿದೆ. ಭೂಕಂಪನದ ಕೇಂದ್ರ ಅರಕಲಗೂಡು ತಾಲ್ಲೂಕಿನ ಮುದಿಗೆರೆ ಗ್ರಾಮ ಎಂದು ಗುರುತಿಸಲಾಗಿದೆ.

ಹೇಮಾವತಿ ಜಲಾಶಯದ ಹಿನ್ನೀರಿನ ಸಮೀಪ ಇರುವ ಈ ಗ್ರಾಮದಲ್ಲಿ ಕಂಪನ ಸಂಭವಿಸುತ್ತಿದ್ದಂತೆ ಜನರು ಆತಂಕಕ್ಕೆ ಒಳಗಾದರು. ಗ್ರಾಮದ ಮೂರು ಮನೆಗಳಲ್ಲಿ ಸಣ್ಣ ಪ್ರಮಾಣದ ಬಿರುಕು ಕಾಣಿಸಿಕೊಂಡಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT