ಹಾಸನ: ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಅವರು ಪುಷ್ಷ ಗುಚ್ಚ ನೀಡಿ ರೋಹಿಣಿ ಸಿಂಧೂರಿ ಅವರನ್ನು ಸ್ವಾಗತಿಸಿದರು.
ಈ ಹಿಂದೆ ರೋಹಿಣಿ ಸಿಂಧೂರಿ ಅವರು ಮಂಡ್ಯ ಜಿಲ್ಲಾ ಪಂಚಾಯ್ತಿಯ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಹಾಸನದ ಜಿಲ್ಲಾಧಿಕಾರಿಯಾಗಿದ್ದ ವಿ.ಚೈತ್ರಾ ಅವರನ್ನು ಸಮಾಜ ಕಲ್ಯಾಣ ಕಲ್ಯಾಣ ಇಲಾಖೆಗೆ ವರ್ಗ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.