ಹಾಸನ: ಜಿಲ್ಲಾಧಿಕಾರಿ ವರ್ಗಾವಣೆ ಸಂಘರ್ಷಕ್ಕೆ ತೆರೆ ಬಿದ್ದಿದ್ದು, ಡಿ.ರಂದೀಪ್ ಅಧಿಕಾರ ವಹಿಸಿಕೊಂಡಿದ್ದಾರೆ.
ರಂದೀಪ್ ಎರಡು ತಿಂಗಳ ಹಿಂದೆಯೇ ಹಾಸನಕ್ಕೆ ವರ್ಗವಾಗಿದ್ದರು.
ಸರ್ಕಾರ ಮಾಡಿರುವ ವರ್ಗಾವಣೆಯನ್ನು ಪ್ರಶ್ನಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಿಎಟಿ ಮತ್ತು ಹೈಕೋರ್ಟ್ ಮೆಟ್ಟಿಲೇರಿದ ಕಾರಣ ಅಧಿಕಾರ ಸ್ವೀಕಾರಕ್ಕೆ ಅಡ್ಡಿಯಾಗಿತ್ತು.
ನೂತನ ಡಿಸಿ ಇಂದು ಹಾಸನಾಂಬೆ ದೇವಿಗೆ ಪೂಜೆ ಸಲ್ಲಿಸಿದ ನಂತರ ಅಧಿಕಾರ ಸ್ವೀಕರಿಸಿದರು.
ರೋಹಿಣಿ ಸಿಂಧೂರಿ ಅಧಿಕಾರ ಹಸ್ತಾಂತರಕ್ಕೆ ಬರಲಿಲ್ಲ. ಎಡಿಸಿ ಪೂರ್ಣಿಮಾ ಅವರಿಂದ ರಂದೀಪ್ ಅಧಿಕಾರ ಸ್ವೀಕರಿಸಿದರು.
* ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.