ADVERTISEMENT

ಹಿಂಬಡ್ತಿಯಲ್ಲಿ ಅನ್ಯಾಯ: ಪ್ರಕರಣ ದಾಖಲಿಸುವ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 4 ಮೇ 2018, 20:00 IST
Last Updated 4 ಮೇ 2018, 20:00 IST

ಬೆಂಗಳೂರು: ಪರಿಶಿಷ್ಟ ಜಾತಿಯ ನೌಕರರಿಗೆ ಹಿಂಬಡ್ತಿ ನೀಡುವಾಗ ನ್ಯಾಯಯುತವಾಗಿ ನಡೆದುಕೊಳ್ಳದ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ವರ್ಗಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಗುತ್ತಿಗೆದಾರರ ಸಂಘ ಮುಂದಾಗಿದೆ.

ಮಾಧ್ಯಮ ಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಸಂಘದ ಅಧ್ಯಕ್ಷ ಎನ್‌.ಮಹದೇವಸ್ವಾಮಿ, ‘ಸೇವಾ ಜ್ಯೇಷ್ಠತಾ ಪಟ್ಟಿ ತಯಾರಿಸುವಾಗ ಪರಿಶಿಷ್ಟ ಜಾತಿ ನೌಕರರಿಗೆ ಅನ್ಯಾಯವಾಗಿದೆ. ಶೇ 18ಕ್ಕಿಂತ ಹೆಚ್ಚಿನ ಪ್ರಮಾಣದ ಮೀಸಲು ಮಿತಿ ದಾಟಿ ಬಡ್ತಿ ನೀಡಿದವರ ವಿರುದ್ಧ ಮಾತ್ರ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಸಾರಾಸಗಟಾಗಿ ಎಲ್ಲರಿಗೂ ಹಿಂಬಡ್ತಿ ನೀಡಲಾಗುತ್ತಿದೆ. ಇದು ತಪ್ಪು. ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗುತ್ತಿದೆ’ ಎಂದು ಅವರು ದೂರಿದರು.

‘ಹಿಂಬಡ್ತಿಗೆ ಒಳಗಾಗಿರುವ ಕೆಲವು ನೌಕರರು ಸಾವಿನ ಮೊರೆ ಹೋಗಿದ್ದಾರೆ. ನೌಕರರಿಗೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿ ರಾಜ್ಯವನ್ನು ಪ್ರತಿನಿಧಿಸುವ ಸಂಸದರ ಮನೆ ಮುಂದೆ ಧರಣಿ ಮಾಡಲು ನಿರ್ಧರಿಸಿದ್ದೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.