ADVERTISEMENT

ಹಿರಿಯ ಪತ್ರಕರ್ತ ಟಿ.ವಿ.ಆರ್ ಶೆಣೈ ನಿಧನ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2018, 19:30 IST
Last Updated 18 ಏಪ್ರಿಲ್ 2018, 19:30 IST
ಹಿರಿಯ ಪತ್ರಕರ್ತ ಟಿ.ವಿ.ಆರ್ ಶೆಣೈ ನಿಧನ
ಹಿರಿಯ ಪತ್ರಕರ್ತ ಟಿ.ವಿ.ಆರ್ ಶೆಣೈ ನಿಧನ   

ಉಡುಪಿ: ಹಿರಿಯ ಪತ್ರಕರ್ತ ಟಿ.ವಿ.ಆರ್. ಶೆಣೈ (77) ಅವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಎರಡು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೇರಳದ ಎರ್ನಾಕುಲಂನವರಾದ ಅವರು, ‘ಸಂಡೇ ಮೇಲ್‌’, ‘ದ ವೀಕ್’ ನಿಯತಕಾಲಿಕ ಸಂಪಾದಕರಾಗಿ, ಇಂಡಿಯನ್ ಎಕ್ಸ್‌ಪ್ರೆಸ್‌, ಮಲಯಾಳ ಮನೋರಮಾ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದರು. ಇಂಡಿಯನ್ ಎಕ್ಸ್‌ಪ್ರೆಸ್, ಗಲ್ಫ್ ನ್ಯೂಸ್ ಸೇರಿದಂತೆ ವಿವಿಧ ಪತ್ರಿಕೆಗಳಿಗೆ ಅಂಕಣವನ್ನು ಬರೆಯುತ್ತಿದ್ದರು. 2013ರಲ್ಲಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT