ADVERTISEMENT

ಹುಬ್ಬಳ್ಳಿ ಬಳಿ ಕೆರೆಗೆ ಉರುಳಿದ ಬಸ್: 30 ಪ್ರಯಾಣಿಕರು ಅಪಾಯದಿಂದ ಪಾರು

​ಪ್ರಜಾವಾಣಿ ವಾರ್ತೆ
Published 6 ಜುಲೈ 2017, 4:03 IST
Last Updated 6 ಜುಲೈ 2017, 4:03 IST
ಹುಬ್ಬಳ್ಳಿ ಬಳಿ ಕೆರೆಗೆ ಉರುಳಿದ ಬಸ್: 30 ಪ್ರಯಾಣಿಕರು ಅಪಾಯದಿಂದ ಪಾರು
ಹುಬ್ಬಳ್ಳಿ ಬಳಿ ಕೆರೆಗೆ ಉರುಳಿದ ಬಸ್: 30 ಪ್ರಯಾಣಿಕರು ಅಪಾಯದಿಂದ ಪಾರು   

ಹುಬ್ಬಳ್ಳಿ: ನಗರದ ಹೊರವಲಯದ ಪುನಾ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವರೂರ ಕ್ರಾಸ್ ಬಳಿ ಮಾಜಿ ಸಚಿವ ಬಸವರಾಜ ಹೊರಟ್ಟಿ ಪಾರ್ಮ್ ಹೌಸ್‌ನ ಕೆರೆಗೆ ಖಾಸಗಿ ಬಸ್‌ ಉರುಳಿ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಬಸ್‌ ಬೆಂಗಳೂರಿನಿಂದ ಮುಂಬೈಗೆ ಹೊರಟಿತ್ತು. ಬಸ್‌ನಲ್ಲಿದ್ದ 30 ಪ್ರಯಾಣಿಕರಲ್ಲಿ ಹಲರಿಗೆ ಸಣ್ಣ ಪುಟ್ಟಗಾಯ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅವಘಡ ಸಂಭವಿಸಿದ್ದು, ದೊಡ್ಡ ಪ್ರಮಾಣದ ದುರಂತವೊಂದು ತಪ್ಪಿದೆ.

ADVERTISEMENT

ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.