ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕು ಖಜೂರಿ ಗ್ರಾಮದಲ್ಲಿ ಹೂತ ಶವ ಹೊರ ತೆಗೆದು ಚಿನ್ನಾಭರಣ ಕಳವು ಮಾಡಲಾಗಿದೆ.
ಪ್ರೇಮಾಬಾಯಿ ಡಗೆ (೭೫) ಐದು ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಮಕ್ಕಳಿರದ ಹಿನ್ನಲೆಯಲ್ಲಿ ಗ್ರಾಮಸ್ಥರು ಇವರ ಮೈಮೇಲಿನ ಚಿನ್ನದ ಒಡವೆ ಸಮೇತ ಅಂತ್ಯಕ್ರಿಯೆ ನೆರವೇರಿಸಿದ್ದರು.
ವಿಷಯ ತಿಳಿದ ಪರಿಚಿತ ವ್ಯಕ್ತಿಗಳೇ ಚಿನ್ನಾಭರಣ ಕಳವು ಮಾಡಿರಬಹುದು ಎಂದು ಶಂಕಿಸಲಾಗಿದೆ. ಸೋಮವಾರ ರಾತ್ರಿ ಸಮಾಧಿಯಿಂದ ಶವ ಹೊರತೆಗದು ಶವದ ಮೈಮೇಲಿನ ೫೦ ಗ್ರಾಂಗೂ ಅಧಿಕ ಚಿನ್ನಾಭರಣ ದೋಚಲಾಗಿದೆ.
ಬೆಳಿಗ್ಗೆ ಸಮಾಧಿ ಮೇಲ್ಗಡೆ ಬಿದ್ದಿರುವ ಶವ ಕಂಡು ಕುಟುಂಬಸ್ಥರು ಕಂಗಾಲಾದರು. ಸ್ಥಳದಲ್ಲೇ ಭೇಟಿ ನೀಡಿದ ಆಳಂದ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.