ಹೊಸಕೋಟೆ: ವಾಜಪೇಯಿ ಆರೋಗ್ಯಶ್ರೀ ಯೋಜನೆ ಅಡಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸೆ. 5ರಂದು ಉಚಿತ ಹೃದಯ ರೋಗ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.
ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30ರ ವರೆಗೆ ತಜ್ಞ ವೈದ್ಯರು ತಪಾಸಣೆ ಮಾಡಲಿದ್ದು ಅಗತ್ಯ ಇದ್ದವರಿಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಔಷಧ, ಊಟೋಪಾಚಾರದ ವ್ಯವಸ್ಥೆಯೂ ಇರುತ್ತದೆ. ತಪಾಸಣೆಗೆ ಬರುವವರು ತಪ್ಪದೆ ಬಿಪಿಎಲ್ ಪಡಿತರ ಚೀಟಿ, ಯಶಸ್ವಿನಿ ಚೀಟಿ ತರಲು ಕೋರಿದೆ. ಬೆಂಗಳೂರಿನ ಸುಗುಣ ಆಸ್ಪತ್ರೆ ಸಹಯೋಗದೊಂದಿಗೆ ಶಿಬಿರ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.