ADVERTISEMENT

ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ

​ಪ್ರಜಾವಾಣಿ ವಾರ್ತೆ
Published 13 ಜೂನ್ 2018, 19:30 IST
Last Updated 13 ಜೂನ್ 2018, 19:30 IST

ಹಲಗೂರು (ಮಳವಳ್ಳಿ): ತಾಲ್ಲೂಕಿನ ಪ್ರವಾಸಿ ತಾಣ ಮುತ್ತತ್ತಿಯ ಕಾವೇರಿ ನದಿ ದಡದಲ್ಲಿ ಭಕ್ತರು ಮತ್ತು ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕಿರುಗಾವಲು ಗ್ರಾಮದ ಪುಟ್ಟಸ್ವಾಮಿ ಅವರ ಪುತ್ರ ವೆಂಕಟೇಶ್ (42) ಮೃತಪಟ್ಟವರು.

ಬೆಂಗಳೂರು ಜೆ.ಪಿ ನಗರದಲ್ಲಿ ವಾಸವಾಗಿದ್ದು, ಗಾರ್ಮೆಂಟ್‌ ಒಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಸ್ನೇಹಿತರ ಜತೆ ಮುತ್ತತ್ತಿಗೆ ಪ್ರವಾಸಕ್ಕೆಂದು ಬಂದಿದ್ದರು. ಹೆಜ್ಜೇನು ದಾಳಿಯಿಂದ ಜ್ಞಾನ ತಪ್ಪಿ ಬಿದ್ದರು. ಸಾತನೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತನ ಕಣ್ಣುಗಳನ್ನು ಪೋಷಕರು ದಾನ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.