ಉಡುಪಿ: ಇತ್ತೀಚೆಗೆ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿ ಆಕ್ಷೇಪಕ್ಕೆ ಗುರಿಯಾಗಿದ್ದ ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಅವರು ಇದೀಗ ಸ್ವ ಇಚ್ಛೆಯಿಂದ ದಂಡ ಕಟ್ಟಿದ್ದಾರೆ.
ಬ್ರಹ್ಮಾವರದ ಕರ್ಜೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಕಾರ್ಯಕರ್ತರೊಬ್ಬರ ಬೈಕ್ ಓಡಿಸಿದ್ದರು. ಆದರೆ ಹೆಲ್ಮೆಟ್ ಧರಿಸಿರಲಿಲ್ಲ. ಈ ಬಗ್ಗೆ ಸಾಮಾಜಿಕ ಮಾದ್ಯಮಗಳಲ್ಲಿ ಚರ್ಚೆ ನಡೆದಿತ್ತು. ಸಚಿವರೇ ನಿಯಮ ಪಾಲಿಸದಿದ್ದರೆ ಹೇಗೆ ಎಂದು ಹಲವರು ಪ್ರಶ್ನಿಸಿದ್ದರು. ಈ ವಿಷಯ ಗೊತ್ತಾದ ನಂತರ ಪ್ರಮೋದ್ ಅವರು ದಂಡದ ಮೊತ್ತ ₹ 100 ಪಾವತಿಸಿದ್ದಾರೆ.
ಈ ವಿಷಯವನ್ನು ಎಸ್ಪಿ ಡಾ. ಸಂಜೀವ್ ಪಾಟೀಲ್ ಅವರು ಖಚಿತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.