ಕಾರವಾರ: ಹೊನ್ನಾವರದ ಹಡಿನಬಾಳದಲ್ಲಿ ನಾಪತ್ತೆಯಾಗಿದ್ದ ಲಾರಿ ಚಾಲಕ ಅಬ್ದುಲ್ ಗಫೂರ್ ಪತ್ತೆಯಾಗಿದ್ದಾರೆ.
ಹೊನ್ನಾವರಕ್ಕೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯ ಚಾಲಕ, ಶಿರಸಿಯ ಬಿಳಿಗಿರಿಕೊಪ್ಪದ ಅಬ್ದುಲ್ ಗಫೂರ್ ಅಬ್ದುಲ್ ಜಬ್ಬಾರ್ ಸುಂಠಿ ನಾಪತ್ತೆಯಾಗಿದ್ದರು. ಹೊನ್ನಾವರದಲ್ಲಿ ನಡೆಯುತ್ತಿದ್ದ ಅಹಿತಕರ ಘಟನೆಗಳಿಂದ ಗಫೂರ್ ಬದುಕಿರುವ ಕುರಿತು ಅತನ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಇಂದು ಗಫೂರ್ ಪತ್ತೆಯಾಗಿದ್ದಾರೆ.
ಗಫೂರ್ ಕಾಲಿಗೆ ಗಾಯಗಳಾಗಿದ್ದು, ಸದ್ಯ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ಬಳಿಕ ಮಾಹಿತಿ ಪಡೆಯಲಾಗುವುದು ಎಂದು ಹೊನ್ನಾವರ ಠಾಣಾ ಪಿಎಸ್ಐ ಆನಂದ್ ಮೂರ್ತಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.