ಚಿತ್ರದುರ್ಗ: ಹೊಳಲ್ಕೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಆಂಜನೇಯ ಅವರು ಪ್ರಚಾರದ ವೇಳೆ ಶನಿವಾರ ಅಸ್ವಸ್ಥಗೊಂಡಿದ್ದಾರೆ.
ಕ್ಷೇತ್ರ ವ್ಯಾಪ್ತಿಯ ಇಸಾಮುದ್ರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಪ್ರಚಾರ ಮಾಡುವ ವೇಳೆ ಈ ಘಟನೆ ಸಂಭವಿಸಿದೆ.
ಬಿರು ಬಿಸಿಲಿನಲ್ಲಿ ತೆರೆದ ವಾಹನದಲ್ಲಿ ಪ್ರಚಾರಕ್ಕೆ ತೆರಳಿದಾಗ ತಲೆಸುತ್ತು ಹಾಗೂ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರಿಗೆ ವೈದ್ಯ ಡಾ.ಸತೀಶ್ ಚಿಕಿತ್ಸೆ ನೀಡಿದ್ದಾರೆ. ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ಎಸ್ ಆಸ್ಪತ್ರೆಯಲ್ಲಿನ ನಾರಾಯಣ ಹೃದಯಲಯಕ್ಕೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.