ADVERTISEMENT

ಹೊಳಲ್ಕೆರೆ ಕ್ಷೇತ್ರದ ಇಸಾಮುದ್ರದಲ್ಲಿ ಪ್ರಚಾರ ವೇಳೆ ಸಚಿವ ಎಚ್. ಆಂಜನೇಯ ಅಸ್ವಸ್ಥ, ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 5 ಮೇ 2018, 16:50 IST
Last Updated 5 ಮೇ 2018, 16:50 IST
ಹೊಳಲ್ಕೆರೆ ಕ್ಷೇತ್ರದ ಇಸಾಮುದ್ರದಲ್ಲಿ ಪ್ರಚಾರ ವೇಳೆ ಸಚಿವ ಎಚ್. ಆಂಜನೇಯ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಹೊಳಲ್ಕೆರೆ ಕ್ಷೇತ್ರದ ಇಸಾಮುದ್ರದಲ್ಲಿ ಪ್ರಚಾರ ವೇಳೆ ಸಚಿವ ಎಚ್. ಆಂಜನೇಯ ಅಸ್ವಸ್ಥ, ಆಸ್ಪತ್ರೆಗೆ ದಾಖಲು   

ಚಿತ್ರದುರ್ಗ: ಹೊಳಲ್ಕೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಆಂಜನೇಯ ಅವರು ಪ್ರಚಾರದ ವೇಳೆ ಶನಿವಾರ ಅಸ್ವಸ್ಥಗೊಂಡಿದ್ದಾರೆ.

ಕ್ಷೇತ್ರ ವ್ಯಾಪ್ತಿಯ ಇಸಾಮುದ್ರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಪ್ರಚಾರ ಮಾಡುವ ವೇಳೆ ಈ ಘಟನೆ ಸಂಭವಿಸಿದೆ.

ಬಿರು ಬಿಸಿಲಿನಲ್ಲಿ ತೆರೆದ ವಾಹನದಲ್ಲಿ ಪ್ರಚಾರಕ್ಕೆ ತೆರಳಿದಾಗ ತಲೆಸುತ್ತು ಹಾಗೂ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರಿಗೆ ವೈದ್ಯ ಡಾ.ಸತೀಶ್ ಚಿಕಿತ್ಸೆ ನೀಡಿದ್ದಾರೆ. ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್‌ಎಸ್ ಆಸ್ಪತ್ರೆಯಲ್ಲಿನ ನಾರಾಯಣ ಹೃದಯಲಯಕ್ಕೆ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.