ಹೊಸಪೇಟೆ: ನಗರದ ಸಿರಸಿನಕಲ್ಲು ಪ್ರದೇಶದಲ್ಲಿ ನಗರಸಭೆ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಿತು.
ರಸ್ತೆ ಮಧ್ಯದಲ್ಲಿ ಮನೆ, ಮಳಿಗೆ ನಿರ್ಮಿಸಿದ್ದರಿಂದ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಈ ಬಗ್ಗೆ ಇತ್ತೀಚೆಗೆ ಸ್ಥಳೀಯರು ನಗರಸಭೆ ಎದುರು ಧರಣಿ ನಡೆಸಿದ್ದರು.
ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಸೋಮವಾರ ನಗರಸಭೆ ನಡೆಸಿತು.
ಸ್ಥಳೀಯರ ವಿರೋಧ:
ನಗರಸಭೆಯ ತೆರವು ಕಾರ್ಯವನ್ನು ಸ್ಥಳೀಯರು ವಿರೋಧಿಸಿದ್ದು, ನೋಟಿಸ್ ನೀಡದೇ ಏಕಾಏಕಿ ಕಟ್ಟಡ ಕೆಡವುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರಸಭೆ ಅಧಿಕಾರಿಗಳೊಂದಿಗೆ ಸ್ಥಳೀಯರು ವಾಗ್ವಾದದಿಂದ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಪೊಲೀಸ್ ಬಂದೋಬಸ್ತ್ನಲ್ಲಿ ತೆರವು ಕಾರ್ಯ ಮುಂದುವರಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.