ADVERTISEMENT

ಹೊಸಪೇಟೆ ತಾಲ್ಲೂಕು ಪಾಪಿನಾಯಕನಹಳ್ಳಿ ಬಳಿ ಬೆಳಿಗ್ಗೆ ಕಾರು–ಲಾರಿ ಡಿಕ್ಕಿ: ಸ್ಥಳದಲ್ಲೆ ನಾಲ್ವರು ಸಾವು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2017, 4:04 IST
Last Updated 21 ಅಕ್ಟೋಬರ್ 2017, 4:04 IST
ಹೊಸಪೇಟೆ ತಾಲ್ಲೂಕು ಪಾಪಿನಾಯಕನಹಳ್ಳಿ ಬಳಿ ಕಾರು–ಲಾರಿ ಡಿಕ್ಕಿಯಾಗಿರುವುದು.
ಹೊಸಪೇಟೆ ತಾಲ್ಲೂಕು ಪಾಪಿನಾಯಕನಹಳ್ಳಿ ಬಳಿ ಕಾರು–ಲಾರಿ ಡಿಕ್ಕಿಯಾಗಿರುವುದು.   

ಹೊಸಪೇಟೆ: ತಾಲ್ಲೂಕಿನ ಪಾಪಿನಾಯಕನಹಳ್ಳಿ ಸಮೀಪ ಕಾರು ಮತ್ತು ಲಾರಿ ನಡುವೆ ಶನಿವಾರ ಬೆಳಿಗ್ಗೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ನಾಲ್ವರು ಮೃತಪಟ್ಟಿದ್ದಾರೆ.

ಚಾಲಕ ಶ್ರೀನಿವಾಸ್‌(46), ವೆಂಕಟಮ್ಮ(46), ನಳಿನಿ(30) ಎಂಬುವರು ಮೃತಪಟ್ಟಿದ್ದಾರೆ. ಮೃತರ ಪೈಕಿ ಇನ್ನೊಬ್ಬರ ಹೆಸರು ಗೊತ್ತಾಗಿಲ್ಲ.

ಚಿತ್ರದುರ್ಗ ಜಿಲ್ಲೆ ಹಿರಿಯೂರಿನವರಾದ ಇವರು ಹೊಸಪೇಟೆಯಲ್ಲಿ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು ಎನ್ನಲಾಗಿದೆ.

ADVERTISEMENT

ಇಬ್ಬರು ಮಕ್ಕಳು ಸೇರಿದಂತೆ ಐವರು ಗಾಯಾಳುಗಳನ್ನು ಹೊಸಪೇಟೆ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಇಲ್ಲಿನ ಆಸ್ಪತ್ರೆ ವೈದ್ಯರು ದೀಪಾವಳಿಗೆ ರಜೆ ತೆರಳಿದ್ದರಿಂದ ಗಾಯಾಳುಗಳನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.