ಬೆಂಗಳೂರು: `ಸೊಸೈಟಿ ಫಾರ್ ಸರ್ವಿಸ್ ಟು ವಾಲೆಂಟರಿ ಏಜೆನ್ಸಿ ಆಫ್ ಕರ್ನಾಟಕ (ಸೋಸ್ವಾ) ಸ್ವಯಂ ಸೇವಾ ಸಂಸ್ಥೆಯು ನೂತನವಾಗಿ ಆಯುಷ್ ಹೋಮಿಯೋಪತಿ ಚಿಕಿತ್ಸಾ ಕೇಂದ್ರ ಆರಂಭಿಸಲಿದೆ~ ಎಂದು ಸಂಸ್ಥೆಯ ನೂತನ ಅಧ್ಯಕ್ಷ ಎಚ್.ಎಸ್.ರೇಣುಕಾ ಪ್ರಸಾದ್ ತಿಳಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು `ಸಂಸ್ಥೆಯು ಹಲವು ವರ್ಷಗಳಿಂದ ಸಾಮಾಜಿಕ, ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಕಾರಣಾಂತರಗಳಿಂದ 2 ವರ್ಷಗಳಿಂದ ಸಂಸ್ಥೆಯ ಚಟುವಟಿಕೆ ಸ್ಥಗಿತವಾ ಗಿತ್ತು. ಈಗ ಮತ್ತೆ ಸೇವಾ ಕಾರ್ಯ ಕೈಗೊಳ್ಳಲಿದೆ~ ಎಂದು ಹೇಳಿದರು.
`ಭಾರತೀಯ ಪರಂಪರೆಯ ಆಯುರ್ವೇದ, ಯೋಗ, ಯುನಾನಿ ಪದ್ದತಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ನೂತನ ಆಯುಷ್ ಹೋಮಿಯೋಪತಿ ಚಿಕಿತ್ಸಾ ಕೇಂದ್ರ ಪ್ರಾರಂಭಿಸಲಿದ್ದೇವೆ. ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಪ್ರತಿ ತಿಂಗಳು ಉಚಿತ ಆರೋಗ್ಯ ಶಿಬಿರಗಳನ್ನು ನಡೆಸಲು ಯೋಜನೆ ಹಮ್ಮಿಕೊಂಡಿದೆ~ ಎಂದರು.
ಸಂಸ್ಥೆಯ ಯೋಜನಾ ನಿರ್ದೇಶಕಿ ಎಸ್.ಜಿ.ಸುಶೀಲಮ್ಮ ಮಾತನಾಡಿದರು. ಕಾರ್ಯದರ್ಶಿ ಎಂ.ಮಠದ್, ಜಂಟಿ ಕಾರ್ಯದರ್ಶಿ ಡಾ.ಕುಮಾರ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.