ADVERTISEMENT

ಹೋಮಿಯೋಪಥಿ ಪರಿಷತ್‌ಗೆ ನೇಮಕ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2014, 19:30 IST
Last Updated 12 ಮಾರ್ಚ್ 2014, 19:30 IST

ಬೆಂಗಳೂರು: ಕೇಂದ್ರೀಯ ಹೋಮಿ­ಯೋ­ಪಥಿ ಪರಿಷತ್‌ನ ಸದಸ್ಯರನ್ನಾಗಿ ನಗ­ರದ ಸರ್ಕಾರಿ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ.ಎ.ಎಲ್‌. ಪಾಟೀಲ್‌ ಮತ್ತು ಹೋಮಿ­ಯೋಪಥಿ ವೈದ್ಯ ಡಾ.ಬಿ.ಟಿ. ರುದ್ರೇಶ್‌ ಅವರನ್ನು  ನೇಮಕ ಮಾಡ­ಲಾಗಿದೆ.

ಐದು ವರ್ಷಗಳ ಅವಧಿಗೆ ಅವರು ಸದಸ್ಯ­ರಾಗಿ ಕಾರ್ಯ ನಿರ್ವಹಿಸ­ಲಿದ್ದಾರೆ. ಅವರು ರಾಜ್ಯದ ಎಲ್ಲಾ ಹೋಮಿಯೋಪಥಿ ಕಾಲೇಜು ಮತ್ತು ಆಸ್ಪತ್ರೆಗಳ ಮೂಲ ಸೌಲಭ್ಯ­ಗಳ ಬಗ್ಗೆ ಪರಿಶೀಲನೆ ನಡೆಸಿ, ಈ ಚಿಕಿತ್ಸಾ ಪದ್ಧತಿ­ಯನ್ನು ಅಭಿವೃದ್ಧಿಗೊಳಿಸಲು ಶ್ರಮಿಸ­ಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.