ವಿರಾಜಪೇಟೆ: ಕೊಡಗು ಸೇರಿದಂತೆ ಆರು ಜಿಲ್ಲೆಗಳಿಗೆ ಮಾರಕವಾಗಿರುವ ಕಸ್ತೂರಿರಂಗನ್ ವರದಿಯನ್ನು ಅನುಷ್ಠಾನಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶ್ವಾಸನೆ ನೀಡದಿದ್ದರೆ ಈಗಾಗಲೇ ಕರೆ ನೀಡಲಾಗಿರುವ ಜ. 7ರ ‘ಕೊಡಗು ಬಂದ್’ ಅಬಾಧಿತವಾಗಿ ನಡೆಯಲಿದೆ ಎಂದು ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ಹೇಳಿದೆ.
ಸಮೀಪದ ಬಾಳುಗೋಡಿನಲ್ಲಿರುವ ಕೊಡವ ಸಮಾಜಗಳ ಒಕ್ಕೂಟದ ಸಭಾಂಗಣದಲ್ಲಿ ಶನಿವಾರ ನಡೆದ ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.