ಬೆಂಗಳೂರು: ‘ಪಕ್ಷಾಂತರಕ್ಕೆ ಕುಮ್ಮಕ್ಕು ನೀಡುತ್ತಿದ್ದೇನೆ ಎಂದು ಜೆಡಿಎಸ್ ವಕ್ತಾರ ರಮೇಶ್ಬಾಬು ಅವರು ನನ್ನ ವಿರುದ್ಧ ಮಾಡಿರುವ ಆರೋಪದಲ್ಲಿ ಹುರುಳಿಲ್ಲ’ ಎಂದು ವಿಧಾನಸಭೆಯ ಕಾರ್ಯದರ್ಶಿ ಎಸ್.ಮೂರ್ತಿ ತಿಳಿಸಿದ್ದಾರೆ.
ವಿಧಾನಸಭೆಯಿಂದ ರಾಜ್ಯಸಭೆಗೆ ಹಾಗೂ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗಳಲ್ಲಿ ವಿಪ್ ಉಲ್ಲಂಘನೆ ಮಾಡಿದರೂ ವಿಧಾನಸಭಾ ಸದಸ್ಯರ ಸದಸ್ಯತ್ವ ರದ್ದಾಗುವುದಿಲ್ಲ ಎಂದು ಅವರು ಸುದ್ದಿಗಾರರಿಗೆ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ರಮೇಶ್ ಬಾಬು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಮೂರ್ತಿ, ‘ಈ ಚುನಾವಣೆಯಲ್ಲಿ ,ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ವಿಧಾನಸಭಾ ಕಾರ್ಯದರ್ಶಿಯ ಹೊಣೆಯೂ ನನಗಿದೆ. ಹಾಗಾಗಿ ಪಕ್ಷಾಂತರ ನಿಷೇಧ ಕಾಯ್ದೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸುವುದು ನನ್ನ ಧರ್ಮ. ಅವರು ಕೇಳಿದ ಪ್ರಶ್ನೆಗಳಿಗಷ್ಟೇ ಮಾಹಿತಿ ನೀಡಿದ್ದೇನೆ.ನಾನು ಹೇಳಿದ ಮಾಹಿತಿ ಸರಿಯಾಗಿಯೇ ಇದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.