ಧಾರವಾಡ: ‘ಪ್ರಜಾವಾಣಿ’ಯ ಬೆಂಗಳೂರು ಕಚೇರಿಯಲ್ಲಿ ಟ್ರೈನಿ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ವೈದ್ಯಹೆಗ್ಗಾರ ಗ್ರಾಮದ ಗಣೇಶ ಶಿವರಾಮ ವೈದ್ಯ ಅವರಿಗೆ ಕರ್ನಾಟಕ ವಿ.ವಿ.ಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಆರು ಚಿನ್ನದ ಪದಕಗಳು ಲಭಿಸಿವೆ.
ಮಂಗಳವಾರ ನಡೆದ ವಿ.ವಿ. ಘಟಿಕೋತ್ಸವದಲ್ಲಿ ಪದಕಗಳನ್ನು ಕುಲಪತಿ ಪ್ರೊ.ಎಚ್.ಬಿ.ವಾಲೀಕಾರ ಪ್ರದಾನ ಮಾಡಿದರು.
‘ಪ್ರಜಾವಾಣಿಯಂತಹ ಪ್ರತಿಷ್ಠಿತ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವುದು ನನ್ನ ಸೌಭಾಗ್ಯ. ಇದೇ ವೃತ್ತಿಯಲ್ಲಿ ಮುಂದುವರಿಯುತ್ತೇನೆ’ ಎಂದು ವೈದ್ಯ ಪ್ರತಿಕ್ರಿಯೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.