ADVERTISEMENT

‘ಬಂಗಾರದ ಮನುಷ್ಯ’ ಸಿದ್ದಲಿಂಗಯ್ಯ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2015, 10:56 IST
Last Updated 12 ಮಾರ್ಚ್ 2015, 10:56 IST

ಬೆಂಗಳೂರು: ಹಿರಿಯ ಚಲನಚಿತ್ರ ನಿರ್ದೇಶಕ ಸಿದ್ದಲಿಂಗಯ್ಯ (79) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

1969ರಲ್ಲಿ ‘ಮೇಯರ್‌ ಮುತ್ತಣ್ಣ’ ಚಿತ್ರದ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪರಿಚಿತರಾದ ಸಿದ್ದಲಿಂಗಯ್ಯ ಅವರು ‘ಬಾಳು ಬೆಳಗಿತು’, ‘ನಮ್ಮ ಸಂಸಾರ’, ‘ತಾಯಿ ದೇವರು’, ‘ನ್ಯಾಯವೇ ದೇವರು’, ‘ಬಂಗಾರದ ಮನುಷ್ಯ’ ಸೇರಿದಂತೆ 20ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದರು.

ಡಾ.ರಾಜ್‌ ಕುಮಾರ್‌ ಅವರು ನಟಿಸಿದ್ದ ಸಿದ್ದಲಿಂಗಯ್ಯ ಅವರ ನಿರ್ದೇಶನದ ‘ಬಂಗಾರದ ಮನುಷ್ಯ’ ಚಿತ್ರ ಅಪೂರ್ವ ಯಶಸ್ಸನ್ನು ಕಂಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.