ದಾವಣಗೆರೆ: ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ದರ ನಿಗದಿ ಮಾಡುವುದು ಸೇರಿದಂತೆ ಕೃಷಿ ಸಂಬಂಧಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ‘ಬೆಳೆ ಆಯೋಗ’ ರಚನೆಗೆ ನಿರ್ಧರಿಸಿದೆ ಎಂದು ಕೃಷಿ ಸಚಿವ ಕೃಷ್ಣಭೈರೇಗೌಡ ಶುಕ್ರವಾರ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಅಂತ್ಯದಲ್ಲಿ ಬೆಳೆ ಆಯೋಗ ರಚಿಸುವ ಮೂಲಕ ಕಾರ್ಯಸೂಚಿಯ ಸ್ಪಷ್ಟ ರೂಪುರೇಷೆ ನೀಡಲಾಗುವುದು.
ಕೃಷಿಯನ್ನು ಯಾಂತ್ರೀಕೃತ ಹಾಗೂ ಗಣಕೀಕರಣ ಮಾಡಲು ರಾಜ್ಯ ಆಯವ್ಯಯದಲ್ಲಿ ರೂ 1 ಸಾವಿರ ಕೋಟಿ ಮೀಸಲಿಡಲಾಗಿದೆ. ರಾಜ್ಯದಲ್ಲಿ ನೀರಾವರಿ ಪ್ರದೇಶ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಬಜೆಟ್ನಲ್ಲಿ ರೂ 50 ಸಾವಿರ ಕೋಟಿ ನಿಗದಿಪಡಿಸಿದೆ ಎಂದು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.