ADVERTISEMENT

‘ಯಶಸ್ವಿನಿ’ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2013, 19:30 IST
Last Updated 15 ಡಿಸೆಂಬರ್ 2013, 19:30 IST

ತುಮಕೂರು: ‘ಯಶಸ್ವಿನಿ’ ಯೋಜನೆ­ಯನ್ನು ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರಿಗೂ ಫೆಬ್ರುವರಿಯಿಂದ ವಿಸ್ತರಿಸಲಾಗುವುದು ಎಂದು ಸಹಕಾರ ಸಚಿವ ಎಚ್‌.ಎಸ್‌.ಮಹದೇವಪ್ರಸಾದ್‌ ಇಲ್ಲಿ ಭಾನುವಾರ ಹೇಳಿದರು.

ತುಮಕೂರು ಗ್ರೈನ್‌ ಮರ್ಚೆಂಟ್ಸ್‌ ಕೋ–ಆಪರೇಟಿವ್‌ ಬ್ಯಾಂಕ್‌ನ ಸುವರ್ಣ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ನಗರ ಪ್ರದೇಶದಲ್ಲಿ ಪ್ರೀಮಿಯಂ ಹೆಚ್ಚಳ ಮಾಡಿ ಯಶಸ್ವಿನಿ ಯೋಜನೆ ಸೌಲಭ್ಯ ನೀಡಲಾಗುವುದು. ಇದರಿಂದ 40 ಲಕ್ಷ ಮಂದಿಗೆ ಪ್ರಯೋಜನ­ವಾಗಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.