
ಪ್ರಜಾವಾಣಿ ವಾರ್ತೆಬೆಂಗಳೂರು: ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ‘ಶ್ರೀ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಕವಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ ಅವರು ಆಯ್ಕೆಯಾಗಿದ್ದಾರೆ.
ಬಿ.ಎಂ.ಶ್ರೀಕಂಠಯ್ಯ ಅವರ ಮೊಮ್ಮಗಳು ಕಮಲಿನಿ ಶಾ.ಬಾಲೂರಾವ್ ಅವರು ಇತ್ತೀಚೆಗೆ ಈ ಪ್ರಶಸ್ತಿ ಸ್ಥಾಪಿಸಿದ್ದಾರೆ.
ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿರುವ ಸಾಹಿತಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತದೆ.
ರೂ 1 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರ ಒಳಗೊಂಡಿದೆ ಎಂದು ಅಧ್ಯಕ್ಷ ಡಾ.ಪಿ.ವಿ.ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಹಿತಿಗಳಾದ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ.ತಾಳ್ತಜೆ ವಸಂತಕುಮಾರ್, ಡಾ.ಎನ್.ಎಸ್.ತಾರಾನಾಥ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಡಾ.ವಿಜಯಾ ಆಯ್ಕೆ ಸಮಿತಿ ಸದಸ್ಯರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.