ADVERTISEMENT

ಲೋಕಸಭಾ ಚುನಾವಣೆ ಹಿನ್ನೆಲೆ ಸಿಇಟಿ ಮುಂದೂಡಿಕೆ: ಏ. 29 ಮತ್ತು 30 ರಂದು ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2019, 14:46 IST
Last Updated 11 ಮಾರ್ಚ್ 2019, 14:46 IST
ಪರೀಕ್ಷೆ ಸಿದ್ಧತೆಯಲ್ಲಿರುವ ವಿದ್ಯಾರ್ಥಿಗಳು– ಸಾಂದರ್ಭಿಕ ಚಿತ್ರ
ಪರೀಕ್ಷೆ ಸಿದ್ಧತೆಯಲ್ಲಿರುವ ವಿದ್ಯಾರ್ಥಿಗಳು– ಸಾಂದರ್ಭಿಕ ಚಿತ್ರ   

ಬೆಂಗಳೂರು: ಲೋಕಸಭಾ ಚುನಾವಣೆ ಕಾರಣ ಎಂಜಿನಿಯರಿಂಗ್ ಮತ್ತು ಇತರ ವೃತ್ತಿ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಏಪ್ರಿಲ್‌ 29 ಮತ್ತು 30 ಕ್ಕೆ ಮುಂದೂಡಲಾಗಿದೆ.

ಏ.23 ರಂದು ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುವುದರಿಂದ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಜಿಲ್ಲೆಗಳು ಮತ್ತು ಹೊರ ರಾಜ್ಯಗಳ ಅಭ್ಯರ್ಥಿಗಳಿಗೆ ಅನಾನುಕೂಲ ಆಗುವುದರಿಂದ ಪರೀಕ್ಷಾ ದಿನಾಂಕವನ್ನು ಪರಿಷ್ಕರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಆರ್‌.ಗಿರೀಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT