ADVERTISEMENT

ಹಿಂದೂ ಮಹಾಗಣಪತಿ ಶೋಭಾಯಾತ್ರೆ ಇಲ್ಲ: ಚಿತ್ರದುರ್ಗ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2021, 17:37 IST
Last Updated 30 ಸೆಪ್ಟೆಂಬರ್ 2021, 17:37 IST
ಕವಿತಾ ಎಸ್‌. ಮನ್ನಿಕೇರಿ
ಕವಿತಾ ಎಸ್‌. ಮನ್ನಿಕೇರಿ   

ಚಿತ್ರದುರ್ಗ: ‘ಇಲ್ಲಿನ ಪ್ರಸಿದ್ಧ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಅ.2ರಂದು ನಡೆಯುವುದಿಲ್ಲ. ಕೋವಿಡ್ ಮೂರನೇ ಅಲೆ ನಿರೀಕ್ಷೆ ಕಾರಣಕ್ಕೆ ಈ ಬಾರಿ ಅವಕಾಶ ನೀಡಿಲ್ಲ’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸ್ಪಷ್ಟಪಡಿಸಿದರು.

‘ಶೋಭಾಯಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಅಸಂಖ್ಯಾತ ಭಕ್ತರು ಬರುತ್ತಾರೆ. ಕೊರೊನಾ ಸೋಂಕು ಸಂಪೂರ್ಣವಾಗಿ ಹೋಗಿಲ್ಲ. ಅದನ್ನು ತಡೆಯುವುದು ಎಲ್ಲರ ಜವಾಬ್ದಾರಿ. ಹೀಗಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಅಂದು ಪ್ರಸಾರ ಆಗಲಿರುವ ವಿಸರ್ಜನಾ ಮಹೋತ್ಸವದ ಲೈವ್‌ ಕಾರ್ಯಕ್ರಮವನ್ನು ಮನೆಯಿಂದಲೇ ಕಣ್ತುಂಬಿಕೊಳ್ಳಿ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT