ADVERTISEMENT

ಉಪ ಚುನಾವಣೆ| ಬಹಿರಂಗ ಪ್ರಚಾರಕ್ಕೆ ತೆರೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 17:53 IST
Last Updated 1 ನವೆಂಬರ್ 2020, 17:53 IST
   

ಬೆಂಗಳೂರು: ಇದೇ 3ರಂದು ಮತದಾನ ನಡೆಯಲಿರುವ ಆರ್‌.ಆರ್‌. ನಗರ ಮತ್ತು ಶಿರಾ ಮತಕ್ಷೇತ್ರದಲ್ಲಿ ಬಹಿರಂಗ ಪ್ರಚಾರ ಭಾನುವಾರ ಅಂತ್ಯಗೊಂಡಿದೆ. ಸೋಮವಾರ ಮನೆಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ.

ಕಾಂಗ್ರೆಸ್‌ ತೊರೆದು ಬಿಜೆಪಿಯಿಂದ ಆರ್‌.ಆರ್‌. ನಗರದಲ್ಲಿ ಕಣಕ್ಕಿಳಿದಿರುವ ಮುನಿರತ್ನ ಅವರಿಗೆ ಸೋಲುಣಿಸಲೇಬೇಕೆಂದು ಕಾಂಗ್ರೆಸ್‌ ನಾಯಕರು ಪಣ ತೊಟ್ಟಿದ್ದಾರೆ. ಜೆಡಿಎಸ್‌ ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾದ ಶಿರಾ ಕ್ಷೇತ್ರವನ್ನು ಮತ್ತೆ ವಶಪಡಿಸಿಕೊಳ್ಳಲು ಹಿರಿಯ ರಾಜಕಾರಣಿ ಟಿ.ಬಿ. ಜಯಚಂದ್ರ ಅವರನ್ನು ಕಾಂಗ್ರೆಸ್‌ ಮತ್ತೊಮ್ಮೆ ಕಣಕ್ಕಿಳಿಸಿದೆ. ಜೆಡಿಎಸ್‌ನಲ್ಲಿದ್ದ ರಾಜೇಶ್‌ಗೌಡರನ್ನು ತನ್ನತ್ತ ಸೆಳೆದು ಟಿಕೆಟ್‌ ಕೊಟ್ಟಿರುವ ಬಿಜೆಪಿ, ಕ್ಷೇತ್ರವನ್ನು ಮೊದಲ ಬಾರಿ ಗೆದ್ದುಕೊಳ್ಳಲು ಎಲ್ಲ ತಂತ್ರಗಳನ್ನು ಬಳಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT