ADVERTISEMENT

ಜಗದೀಶ್ ಶೆಟ್ಟರ್‌ರಿಂದ ₹ 60 ಕೋಟಿ ಆಮಿಷ: ಶಾಸಕ ಕೆ.ಎಂ.ಶಿವಲಿಂಗೇಗೌಡ ಆರೋಪ

​ಪ್ರಜಾವಾಣಿ ವಾರ್ತೆ
Published 16 ಜನವರಿ 2019, 20:30 IST
Last Updated 16 ಜನವರಿ 2019, 20:30 IST
ಕೆ.ಎಂ.ಶಿವಲಿಂಗೇಗೌಡ
ಕೆ.ಎಂ.ಶಿವಲಿಂಗೇಗೌಡ   

ಹಾಸನ: ‘ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಶಾಸಕ ಗೌರಿಶಂಕರ್ ಅವರಿಗೆ ಬಿಜೆಪಿ ಮುಖಂಡ ಜಗದೀಶ್ಶೆಟ್ಟರ್‌ ಕರೆ ಮಾಡಿ ₹ 60 ಕೋಟಿ ನಗದು ಹಾಗೂ ಸಚಿವ ಸ್ಥಾನ ನೀಡುವುದಾಗಿ ಆಮಿಷ ಒಡ್ಡಿದ್ದಾರೆ. ಗೌರಿಶಂಕರ್‌ ಅವರೇ ನನಗೆ ಕರೆ ಮಾಡಿ ಈ ವಿಷಯ ತಿಳಿಸಿದ್ದಾರೆ’ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ಸಚಿವ ಎಚ್‌.ಡಿ.ರೇವಣ್ಣ ಜೊತೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ವಿಷಯವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಗಮನಕ್ಕೂ ತರಲಾಗಿದೆ ಎಂದರು.

‘ರಾಜ್ಯದ 166 ತಾಲ್ಲೂಕು ಬರಕ್ಕೆ ಸಿಲುಕಿವೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಜೊತೆ ಬಿಜೆಪಿ ನಾಯಕರು ಚರ್ಚಿಸಿ ಕೇಂದ್ರದಿಂದ ಅನುದಾನ ತರಲು ಒಟ್ಟಾಗಿ ಪ್ರಯತ್ನಿಸುತ್ತಿಲ್ಲ. ಆರು ತಿಂಗಳಿಂದ ಸರ್ಕಾರ ಬೀಳಿಸಲುವ್ಯರ್ಥ ಪ್ರಯತ್ನ ಮಾಡುವುದರಲ್ಲೇನಿರತರಾಗಿದ್ದಾರೆ’ ಎಂದು ಎಚ್‌.ಡಿ.ರೇವಣ್ಣ ಟೀಕಿಸಿದರು.

ADVERTISEMENT

ಹೊಸದಾಗಿ ಆಯ್ಕೆಯಾಗಿರುವ ಶಾಸಕರನ್ನು ಕರೆದುಕೊಂಡು ದೆಹಲಿ, ಮಹಾರಾಷ್ಟ್ರ ಪ್ರವಾಸ ಮಾಡುತ್ತಿದ್ದಾರೆ. ಅಲ್ಲಿನ ಖಾಸಗಿ ಹೋಟೆಲ್‌ಗಳಲ್ಲಿ ಖರ್ಚು ಮಾಡುವ ಹಣವನ್ನು ರಾಜ್ಯದ ತೀವ್ರ ಬರಗಾಲ ಇರುವ ತಾಲ್ಲೂಕುಗಳಿಗಾದರೂ ನೀಡಲಿ’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.