ADVERTISEMENT

ಬರಪೀಡಿತ ತಾಲ್ಲೂಕುಗಳಿಗೆ ಹಣದ ಬದಲು 10 ಕೆ.ಜಿ ಅಕ್ಕಿ: ಆಹಾರ ಸಚಿವ ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2023, 15:58 IST
Last Updated 4 ಸೆಪ್ಟೆಂಬರ್ 2023, 15:58 IST
ಕೆ.ಎಚ್‌. ಮುನಿಯಪ್ಪ
ಕೆ.ಎಚ್‌. ಮುನಿಯಪ್ಪ   

ಬೆಂಗಳೂರು: ‘ಬರಪೀಡಿತ ತಾಲ್ಲೂಕುಗಳ ಫಲಾನುಭವಿಗಳಿಗೆ ಹಣದ ಬದಲು 10 ಕೆ.ಜಿ. ಅಕ್ಕಿ ನೀಡಲಾಗುವುದು’ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು,‌ ‘ಬರಪೀಡಿತ ತಾಲ್ಲೂಕುಗಳನ್ನು ಘೋಷಿಸುತ್ತಿದ್ದಂತೆ, ಆ ತಾಲ್ಲೂಕುಗಳಲ್ಲಿ 10 ಕೆ.ಜಿ. ಅಕ್ಕಿ ಪೂರೈಕೆ ಮಾಡುತ್ತೇವೆ’ ಎಂದರು.

‘ಪಡಿತರಚೀಟಿದಾರರಿಗೆ 10 ಕೆ.ಜಿ. ಅಕ್ಕಿ ಪೂರೈಸುವ ಬಗ್ಗೆ ವಾರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಆಂಧ್ರಪ್ರದೇಶ, ತೆಲಂಗಾಣ ಮತ್ತು ಛತ್ತೀಸಗಢ ಸರ್ಕಾರಗಳು ಅಕ್ಕಿ ಕೊಡಲು ಮುಂದೆ ಬಂದಿವೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ’ ಎಂದು ಹೇಳಿದರು.

ADVERTISEMENT

‘ಜುಲೈ ತಿಂಗಳಿನಲ್ಲಿ 97 ಲಕ್ಷ ಕಾರ್ಡ್‌ದಾರರಿಗೆ ಡಿಬಿಟಿ (ನೇರ ನಗದು ವರ್ಗಾವಣೆ) ಮಾಡಿದ್ದೇವೆ. ಆಗಸ್ಟ್ ತಿಂಗಳಲ್ಲಿ 3.69 ಕೋಟಿ ಜನರಿಗೆ ₹ 606 ಕೋಟಿ ಬಿಡುಗಡೆ ಮಾಡಿದ್ದೇವೆ. 21 ಲಕ್ಷ ಜನರಿಗೆ ಬ್ಯಾಂಕ್ ಖಾತೆ ಇಲ್ಲ. ಎರಡು ಲಕ್ಷ ಜನರಿಗೆ ನಾವೇ ಬ್ಯಾಂಕ್ ಖಾತೆ ಮಾಡಿದ್ದೇವೆ. 14 ಲಕ್ಷ ಜನರಿಗೆ ಬ್ಯಾಂಕ್‌ ಖಾತೆ ಮಾಡಿಸುತ್ತಿದ್ದೇವೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.