ಚಿಕ್ಕಮಗಳೂರು: ‘ತರೀಕೆರೆ ಪುರಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ವಿರುದ್ಧ ಕಣಕ್ಕಿಳಿದು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ 11 ಕಾರ್ಯಕರ್ತರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದ್ದಾರೆ.
‘ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ದೂರು ಆಧರಿಸಿ ಕ್ರಮ ಜರುಗಿಸಲಾಗಿದೆ. ಟಿ.ಕೆ.ಪ್ರಕಾಶ್, ಮಮತಾ ಶೇಖರ್, ತಿಮ್ಮಕ್ಕ ಗಾಳಪ್ಪ, ಜ್ಯೋತಿ ಮುನೀರ್, ಪರಮೇಶ್ ಹೇಮಾವತಿ, ನೂರ್ ಬಾಷ, ಧವನ್ ರಾಜ್, ಧರ್ಮರಾಜ್, ಈರಣ್ಣ , ಟಿ.ಆರ್.ಪುಟ್ಟಮ್ಮ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.