ADVERTISEMENT

ತರಕಾರಿ ಬೆಳೆಗಾರರಿಗೆ ₹ 137 ಕೋಟಿ ನೀಡಲು ರಾಜ್ಯ ಸರ್ಕಾರ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 14 ಮೇ 2020, 19:35 IST
Last Updated 14 ಮೇ 2020, 19:35 IST
ಮಾರುಕಟ್ಟೆ ಇಲ್ಲದೆ ಹಿನ್ನೆಲೆಯಲ್ಲಿ ಟೊಮೆಟೊ ಬೆಳೆಯನ್ನು ನಾಶಪಡಿಸುತ್ತಿರುವ ರೈತ
ಮಾರುಕಟ್ಟೆ ಇಲ್ಲದೆ ಹಿನ್ನೆಲೆಯಲ್ಲಿ ಟೊಮೆಟೊ ಬೆಳೆಯನ್ನು ನಾಶಪಡಿಸುತ್ತಿರುವ ರೈತ    

ಬೆಂಗಳೂರು: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ತರಕಾರಿ ಮತ್ತು ಹಣ್ಣು ಬೆಳೆಗಾರರಿಗೆ ₹ 137 ಕೋಟಿ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

50,083 ಹೆಕ್ಟೇರ್‌ನಲ್ಲಿ ತರಕಾರಿ ಹಾಗೂ 41,054 ಹೆಕ್ಟೇರ್‌ನಲ್ಲಿ ಹಣ್ಣು ಬೆಳೆಯಲಾಗಿದ್ದು, ಪ್ರತಿ ಹೆಕ್ಟೇರ್‌ಗೆ ₹ 15 ಸಾವಿರದಂತೆ ಪರಿಹಾರ ಸಿಗಲಿದೆ.

ಬಾಳೆ, ಪಪ್ಪಾಯ, ಟೇಬಲ್‌ ದಾಕ್ಷಿ, ಅಂಜೂರ, ಅನಾನಸ್‌, ಕಲ್ಲಂಗಡಿ, ಕರಬೂಜ, ಬೋರೆ, ಬೆಣ್ಣೆಹಣ್ಣು ಬೆಳೆಗಾರರಿಗೆ ಹಾಗೂ ಟೊಮೆಟೊ, ಹಸಿರು ಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಗುಂಬಳ, ಬೂದುಗುಂಬಳ, ಕ್ಯಾರೆಟ್‌, ಈರುಳ್ಳಿ, ದಪ್ಪ ಮೆಣಸಿನಕಾಯಿ, ಸೊಪ್ಪು, ಹೀರೆಕಾಯಿ, ತೊಂಡೆಕಾಯಿ ಬೆಳೆದ ರೈತರಿಗೆ ಈ ಪರಿಹಾರ ಸಿಗಲಿದೆ.

ADVERTISEMENT

ವಿದ್ಯುತ್ ಮಗ್ಗಕ್ಕೆ ₹ 25 ಕೋಟಿ: ಈ ಹಿಂದೆ ಪರಿಹಾರ ಘೋಷಿಸುವಾಗ ಕೈಮಗ್ಗ ನೇಕಾರರಿಗೆ ತಲಾ ₹ 2 ಸಾವಿರದಂತೆ ನೀಡಲು ನಿರ್ಧರಿಸಲಾಗಿತ್ತು. ಅದನ್ನು 1.25 ಲಕ್ಷ ವಿದ್ಯುತ್ ಚಾಲಿತ ಘಟಕಗಳ ಎಲ್ಲ ಕೂಲಿ ಕಾರ್ಮಿಕರಿಗೆ ವಿಸ್ತರಿಸಿದ್ದು, ಇದಕ್ಕಾಗಿ ₹ 25 ಕೋಟಿ ನೀಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.