ದಾವಣಗೆರೆ: ಐಎಂಎ ವಂಚನೆ ಪ್ರಕರಣ ಸಂಬಂಧ ನಗರದಲ್ಲಿ ದಿನೇ ದಿನೇ ದೂರಿನ ಸಂಖ್ಯೆ ಹೆಚ್ಚಾಗುತ್ತಿದೆ. ನಗರದಲ್ಲಿ ಇದುವರೆಗೆ400ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಣ ಹೂಡಿಕೆ ಮಾಡಿದವರಿಗೆ ದೂರು ಸಲ್ಲಿಸಲು ಪ್ರತ್ಯೇಕ ಕೇಂದ್ರ ತೆರೆಯಲಾಗಿದ್ದು, ನಗರದಲ್ಲಿ ಇದುವರೆಗೆ ₹ 14 ಕೋಟಿಗೂ ಹೆಚ್ಚುಹಣ ಹೂಡಿಕೆಯಾಗಿದೆ. ಹಣ ಕಳೆದುಕೊಂಡವರಲ್ಲಿ ಹೆಚ್ಚಿನವರು ಕಾರ್ಮಿಕರು, ಕಿರಾಣಿ ಅಂಗಡಿ ನಡೆಸುವವರು, ಚಿಕ್ಕ ವ್ಯಾಪಾರ ನಡೆಸುತ್ತಿದ್ದವರು ಇದ್ದಾರೆ. ದುಬೈನಲ್ಲಿ ಕೆಲಸ ಮಾಡುತ್ತಿದ್ದ ನಿಸಾರ್
ಅಹಮ್ಮದ್ ಎಂಬುವವರು ₹ 40 ಲಕ್ಷ ಹೂಡಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.