ಅಥಣಿ: ತಾಲ್ಲೂಕಿನ ಅವರಕೋಡ ಗ್ರಾಮದ ಕೃಷ್ಣಾ ನದಿಯಲ್ಲಿ ತೇಲಿ ಬಂದ ವ್ಯಕ್ತಿಯ ಮೃತ ದೇಹದೊಂದಿಗಿದ್ದ ಬ್ಯಾಗ್ನಲ್ಲಿ 1.5 ಕೆ.ಜಿ. ಬಂಗಾರ ಪತ್ತೆಯಾಗಿದೆ.
ಮೃತ ದೇಹವು ಬುಧವಾರ ರಾತ್ರಿ ದಡದಲ್ಲಿ ಸಿಲುಕಿರುವುದನ್ನು ಗಮನಿಸಿದ ಕೆಲವರು ಅಥಣಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಮೃತರನ್ನು ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆ ಮೀರಜ್ ತಾಲ್ಲೂಕಿನ ಪಾಟಗಾಂವ ಗ್ರಾಮದ ಸಾಗರ ಪಾಟೀಲ (30) ಎಂದು ಗುರುತಿಸಲಾಗಿದೆ. ‘ಮೃತರ ಕೊರಳಲ್ಲಿದ್ದ ಬ್ಯಾಗ್ನಲ್ಲಿ ಒಂದೂವರೆ ಕೆ.ಜಿ. ಚಿನ್ನದ ಗಟ್ಟಿ ಸಿಕ್ಕಿದೆ. ದೇಹದ ಮೇಲೆ ಗಾಯದ ಗುರುತುಗಳಿದ್ದವು. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ’ ಎಂದು ಡಿವೈಎಸ್ಪಿ ಎಸ್.ವಿ. ಗಿರೀಶ್ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.