ADVERTISEMENT

18ರ ನಂತರ ನೈರುತ್ಯ ಮುಂಗಾರು ಪ್ರಬಲ

​ಪ್ರಜಾವಾಣಿ ವಾರ್ತೆ
Published 14 ಜುಲೈ 2017, 20:16 IST
Last Updated 14 ಜುಲೈ 2017, 20:16 IST
18ರ ನಂತರ ನೈರುತ್ಯ ಮುಂಗಾರು ಪ್ರಬಲ
18ರ ನಂತರ ನೈರುತ್ಯ ಮುಂಗಾರು ಪ್ರಬಲ   

ಬೆಂಗಳೂರು:  ‘ನೈರುತ್ಯ ಮುಂಗಾರು 18ರ ನಂತರ ಪ್ರಬಲವಾಗಲಿದೆ. ಇದರಿಂದ ರಾಜ್ಯದ ಎಲ್ಲೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ’ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದರು.

‘ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಗಳಲ್ಲಿ ವಾಯುಭಾರ ಕುಸಿತ ಆಗುವ ಸೂಚನೆ ಇದೆ. ಇದರಿಂದ ದಕ್ಷಿಣ ಒಳನಾಡು ಭಾಗಗಳಾದ ಕೊಡಗು, ಮೈಸೂರು, ಚಾಮರಾಜನಗರಗಳಲ್ಲಿ ಉತ್ತಮ ಮಳೆಯಾಗಲಿದೆ’ ಎಂದರು. ‘ಸದ್ಯ ಕರಾವಳಿ ಭಾಗದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಇನ್ನೂ 4ದಿನ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT