ADVERTISEMENT

ಇರಾನ್‌ನಲ್ಲಿ 18 ಮೀನುಗಾರರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2019, 19:26 IST
Last Updated 8 ಜನವರಿ 2019, 19:26 IST

ಭಟ್ಕಳ (ಉತ್ತರ ಕನ್ನಡ): ದುಬೈಯಿಂದ ಮೀನುಗಾರಿಕೆಗೆ ತೆರಳಿ, ಗಡಿ ಉಲ್ಲಂಘನೆ ಆರೋಪದಲ್ಲಿ ಇರಾನ್ ಸರ್ಕಾರದಿಂದ 2018ರ ಜುಲೈ 27ರಂದು ಬಂಧಿತರಾಗಿದ್ದ ಜಿಲ್ಲೆಯ 18 ಮಂದಿ ಮೀನುಗಾರರನ್ನು ಮಂಗಳವಾರ ಬಿಡುಗಡೆ ಮಾಡಲಾಗಿದೆ.

ಮುರ್ಡೇಶ್ವರದ ಇಬ್ರಾಹಿಂ ಮುಲ್ಲಾ ಫಕೀರಾ, ಮೊಹಮ್ಮದ್ ಅನ್ಸಾರ್ ಇಸ್ಮಾಯಿಲ್ ಬಾಪು, ನಯೀಮ್ ಹಸನ್ ಭಾಂಡಿ, ತೆಂಗಿನಗುಂಡಿಯ ಖಲೀಲ್ ಪಾನಿಬುಡು, ಉಸ್ಮಾನ್ ಬೊಂಬಾಯಿಕರ್ ಮುಹಮ್ಮದ್ ಇಸ್ಹಾಖ್, ಅಬ್ದುಲ್ ಮೊಹಮ್ಮದ್ ಹುಸೇನ್, ಮೊಹಮ್ಮದ್ ಷರೀಫ್‌ ಸೂಫ್ ಬಾಪು ಸೇರಿದಂತೆ ಎಲ್ಲರೂ ಬಿಡುಗಡೆಯಾಗಿದ್ದು, ಈ ಬಗ್ಗೆ ಮೀನುಗಾರರು ತಮ್ಮ ಕುಟುಂಬದ ಸದಸ್ಯರಿಗೆ ವಾಟ್ಸ್‌ಆ್ಯಪ್ ಸಂದೇಶದ ಮೂಲಕ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT